ಪಾಕಿಸ್ತಾನದ ವಿರುದ್ಧ ಭಾರತ ಆಕ್ರಮಣಕಾರಿ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಪಾಕಿಸ್ತಾನದ ನಿರ್ಗಮಿತ ರಕ್ಷಣಾ ಸಚಿವ ಖುರಾಮ್ ದಸ್ತಗಿರ್ ಖಾನ್ ಹೇಳಿದ್ದಾರೆ. ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆಯನ್ನು ಹೆಚ್ಚಿಸುತ್ತಿರುವ ಆರೋಪವನ್ನೂ ಮಾಡಿರುವ ಖಾನ್, ಭಾರತ ಎಷ್ಟೇ ಆಕ್ರಮಣಕಾರಿಯಾದರೂ ಕಾಶ್ಮೀರದ ಜನತೆಗೆ ಪಾಕಿಸ್ತಾನ ಬೆಂಬಲ ನೀಡುವುದನ್ನು ಮುಂದುವರೆಸುತ್ತದೆ ಎಂದು ಹೇಳಿದೆ.