ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ 17 ಮಂದಿ ಬಲಿ, 9 ಗಾಯ

ಉತ್ತರ ಪ್ರದೇಶದ ವಿವಿಧ ಕಡೆಗಳಲ್ಲಿ ಚಂಡಮಾರುತದ ಅಬ್ಬರ ಜೋರಾಗಿದ್ದು, ಈವರೆಗೂ 15 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉತ್ತರ ಪ್ರದೇಶ: ಉತ್ತರ ಪ್ರದೇಶದ  ವಿವಿಧ ಕಡೆಗಳಲ್ಲಿ ವಿನಾಶಕಾರಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ  17  ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಒಳನಾಡು ಭಾಗದಲ್ಲಿ  ಮಳೆ ಅಥವಾ  ಚಂಡಮಾರುತ  ಹೆಚ್ಚಾಗಲಿದೆ  ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 ಈ ತಿಂಗಳು ದೇಶದ ವಿವಿಧ ರಾಜ್ಯಗಳಲ್ಲಿ ಉಂಟಾದ ಚಂಡಮಾರುತದ ಘಟನೆಗಳು ವಿನಾಶದ ಪ್ರವಾಹವನ್ನು ತಂದೊಡ್ಡಿದ್ದವು.  ಮೇ 2, 3 ರಂದು  ಐದು ರಾಜ್ಯಗಳಲ್ಲಿ  ಚಂಡಮಾರುತದ ಅಬ್ಬರಕ್ಕೆ ಸಿಲುಕಿ 134 ಮಂದಿ ಸಾವನ್ನಪ್ಪಿದ್ದು, ಸುಮಾರು 400 ಮಂದಿ ಗಾಯಗೊಂಡಿದ್ದರು.
 ಚಂಡಮಾರುತದಿಂದಾಗಿ ಉತ್ತರಪ್ರದೇಶದಲ್ಲಿಯೇ ಭಾರಿ ಹಾನಿಯಾಗಿದ್ದು, ಸುಮಾರು 80 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಆಗ್ರಾ ಜಿಲ್ಲೆಗೆ ಸೇರಿದವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com