ಈ ಬಗ್ಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಿರುವ ಕೇಂದ್ರ ಜಲಸಂಪನ್ಮೂಲ ಇಲಾಖೆ, ಅಧ್ಯಕ್ಷ ಮತ್ತು 8 ಮಂದಿ ಸದಸ್ಯರ ಸಮಿತಿಯನ್ನು ರಚನೆ ಮಾಡಿದೆ. ಈ 8 ಮಂದಿ ಸದಸ್ಯರ ಪೈಕಿ ನಾಲ್ಕು ಮಂದಿ ಖಾಯಂ ಸದಸ್ಯರಾಗಿದ್ದು, ಉಳಿದ ನಾಲ್ಕು ಮಂದಿ ತಾತ್ಕಾಲಿಕ ಸದಸ್ಯರಾಗಿರಲಿದ್ದಾರೆ. ಈ ಸದಸ್ಯರು ಜಲವಿವಾದ ಇರುವ ನಾಲ್ಕು ರಾಜ್ಯಗಳನ್ನು ಪ್ರತಿನಿಧಿಸಲಿದ್ದಾರೆ. ಇನ್ನು ಈ ಸಮಿತಿ ಕಾವೇರಿ ನದಿ ಪಾತ್ರದ ರಾಜ್ಯಗಳ ನೀರಿನ ಅಗತ್ಯತೆ, ಡ್ಯಾಂಗಳಲ್ಲಿರುವ ನೀರಿನ ಪ್ರಮಾಣ, ರಾಜ್ಯಗಳ ಅವಶ್ಯಕತೆಗೆ ಅನುಗುಣವಾಗಿ ಆಯಾ ರಾಜ್ಯಗಳಿಗೆ ನೀರು ಬಿಡುಗಡೆ ಮಾಡಲಿದೆ.