ಸಂಗ್ರಹ ಚಿತ್ರ
ದೇಶ
ಕಾಶ್ಮೀರದಲ್ಲಿ ಪ್ರತಿಭಟನಕಾರರ ಮೇಲೆ ಹರಿದ ಸಿಆರ್ಪಿಎಫ್ ವಾಹನ, ಯುವಕ ಸಾವು!
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಿಆರ್ಪಿಎಫ್ ವಾಹನದ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದು ಈ ವೇಳೆ ವೇಗವಾಗಿ ಬಂದ ವಾಹನದ ಕೆಳಗೆ ಸಿಲುಕ್ಕಿದ್ದ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಿಆರ್ಪಿಎಫ್ ವಾಹನದ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದು ಈ ವೇಳೆ ವೇಗವಾಗಿ ಬಂದ ವಾಹನದ ಕೆಳಗೆ ಸಿಲುಕ್ಕಿದ ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಶುಕ್ರವಾರ ನೌಹಾಟ ಬಳಿ ಪ್ರತಿಭಟನಕಾರರು ಪ್ರತಿಭಟನೆಯಲ್ಲಿ ನಿರತರಾಗಿದ್ದು ಈ ವೇಳೆ ಅಲ್ಲಿಗೆ ಬಂದ ಸಿಆರ್ಪಿಎಫ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಉದ್ರಿಕ್ತರ ಕಡೆ ವೇಗವಾಗಿ ಸಿಆರ್ಪಿಎಫ್ ವಾಹನ ಬಂದಿದ್ದು ವಾಹನದ ಕೆಳಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೃತ ಯುವಕನನ್ನು 21 ವರ್ಷದ ಕೈಸೇರ್ ಅಹಮ್ಮದ್ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಕೈಸೆರ್ ನನ್ನು ನಿನ್ನೆ ಶೇರ್ ಇ ಕಾಶ್ಮೀರ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಣಿವೆ ರಾಜ್ಯದಲ್ಲಿ ಇದೀಗ ಪ್ರತಿಭಟನೆಯ ಕಾವು ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಧಗಿತಗೊಳಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ