ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ನಿಜಕ್ಕೂ ದುರಾದೃಷ್ಟಕರ. ಭಾರತ ಹಾಗೂ ಪಾಕಿಸ್ತಾನದ ಡಿಜಿಎಂಒ ಮಾತುಕತೆ ಬಳಿಕವೂ ಗಡಿಯಲ್ಲಿ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ. ಎರಡೂ ದೇಶದ ಗಡಿಯಲ್ಲಿಯೂ ಸಾವುಗಳು ಸಂಭವಿಸುತ್ತಿವೆ ಇದು ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.