ಒಬಿಸಿ ಸಮುದಾಯಕ್ಕೆ ಸೇರಿದ ಕೇಶವ್ ಪ್ರಸಾದ್ ಮೌರ್ಯ ಅವರ ನೇತೃತ್ವದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆಯನ್ನು ಎದುರಿಸಿತ್ತು. ಆದರೆ ನಂತರ ಯೋಗಿ ಆದಿತ್ಯನಾಥ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಕೇಶವ್ ಮೌರ್ಯ ಅವರು ಸಿಎಂ ಆಗುತ್ತಾರೆ ಎಂದು ಹಿಂದುಳಿದ ಸಮುದಾಯ ಮತದಾರರು ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ ಅವರ ಆಕ್ರೋಶ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.