ಕಳೆದ ಗುರುವಾರ ಮಧ್ಯಾಹ್ನ ಥೆಮ್ ಮೆಟೋರ್ ಪ್ರದೇಶದ ನಿವಾಸಿಗಳು ಬಸ್ ಕ್ಲೀನರ್ ಮೇಲೆ ಹಲ್ಲೆ ನಡೆಸಿರುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ ನಂತರ ಗಲಭೆ ಆರಂಭವಾಗಿತ್ತು. ಗಲಭೆಯಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದು, ಐದು ವಾಹನಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ವಲಸಿಗರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದ್ದು ಹಲವು ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ.