ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಇಂತಹುದೊಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದ್ದು, ಪತ್ರಿಕೆಯ ಸಂಪಾದಕರೂ ಕೂಡ ಆಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ತಮ್ಮ ಲೇಖನದಲ್ಲಿ ಶಿವಸೇನೆ ಬಿಜೆಪಿಯ ಅತೀ ದೊಡ್ಡ ಎದುರಾಳಿ ಎಂದು ಹೇಳಿದ್ದಾರೆ. ಅಲ್ಲದೆ ಈ ದೇಶಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಜುಗಲ್ ಬಂದಿ ಬೇಕಿಲ್ಲ. ಕಾಂಗ್ರೆಸ್ ಅಥವಾ ಜೆಡಿಎಸ್ ನ ಜ್ಯಾತ್ಯಾತೀತ ನಾಯಕ ದೇವೇಗೌಡರನ್ನು ಸ್ವೀಕರಿಸಿದೆ. ಪ್ರಧಾನಿ ಮೋದಿ, ಅಮಿತ್ ಶಾ ಗಿಂತ 'ಜ್ಯಾತ್ಯಾತೀತ' ಹೆಚ್ ಡಿ ದೇವೇಗೌಡ ಉತ್ತಮ ಎಂದು ಅವರು ಹೇಳಿದ್ದಾರೆ.