ಕಾಂಗ್ರೆಸ್ ನ ಜಾತ್ಯಾತೀತ ಸಿದ್ಧಾಂತಕ್ಕೆ ತದ್ವಿರುದ್ಧವಾಗಿರುವ ಸಿದ್ಧಾಂತ ಹೊಂದಿರುವ ಸಂಘಟನೆಯ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೋಗಲು ನಿರ್ಧರಿಸಿರುವುದು ಅಚ್ಚರಿ ಉಂಟುಮಾಡಿದೆ. ತುರ್ತು ಪರಿಸ್ಥಿತಿಯ ನಂತರ ಕಾಂಗ್ರೆಸ್ ಎದುರಿಸಿದ ಸಂಕಷ್ಟದ ದಿನಗಳಲ್ಲಿ ನೀವು ಪಕ್ಷದ ಜೊತೆಗೆ ನಿಂತವರು, ತುರ್ತು ಪರಿಸ್ಥಿತಿಯ ನಂತರ ಕಾಂಗ್ರೆಸ್ ಪಕ್ಷದ ಪುನರುಜ್ಜೀವನಕ್ಕೆ ನಿಮ್ಮ ಕೊಡುಗೆ, ಸಮರ್ಪಣೆಯನ್ನು ಎಂದಿಗೂ ಸ್ಮರಿಸುವಂಥಹದ್ದು, ಆದ್ದರಿಂದ ನಿಮ್ಮ ನಿರ್ಧಾರವನ್ನು ನೀವು ಮರುಪರಿಶೀಲಿಸಬೇಕು ಎಂದು ಅಸ್ಸಾಂ ಕೈ ಅಧ್ಯಕ್ಷ ರಿಪುನ್ ಬೋರಾ ಒತ್ತಾಯಿಸಿದ್ದಾರೆ.