ಸುಮಾರು 20,000 ಕೋಟಿಯಷ್ಟು ಬಾಕಿ ಹಣವನ್ನು ಸರ್ಕಾರ ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದು, ಇದೇ 80,000 ಕೋಟಿ ರೂಪಾಯಿಯಲ್ಲಿ ಆ ಮೊತ್ತವೂ ಸೇರ್ಪಡೆಯಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈತರಿಗೆ ಅಸಮಾಧಾನವಾಗದಂತೆ ಎಚ್ಚರಿಕೆ ವಹಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.