ಭಾರತದ ಗಡಿ ಗ್ರಾಮ ಪ್ರದೇಶಗಳಲ್ಲಿ ಪಾಕಿಸ್ತಾನ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಜೂ.04 ರಂದು ಭಾರತ ಹಾಗೂ ಪಾಕಿಸ್ತಾನದ ನಡುವೆ ಧ್ವಜ ಸಭೆ (ಫ್ಲಾಗ್ ಮೀಟಿಂಗ್) ನಡೆದಿತ್ತು. ಸಭೆಯಲ್ಲಿ ಉಭಯ ದೇಶಗಳ ಅಧಿಕಾರಿಗಳು ಶಾಂತಿ ಕಾಪಾಡುವುದಕ್ಕೆ ಒಪ್ಪಿಗೆ ನೀಡಿದ್ದರು, ಇದೇ ವೇಳೆ ಭಾರತದ ಬಿಎಸ್ಎಫ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿತ್ತು. ಅಪ್ರಚೋದಿತ ದಾಳಿ ನಡೆಸಿದರೆ ಪ್ರತೀಕಾರ ತೆಗೆದುಕೊಳ್ಳುವುದು ಖಂಡಿತ ಎಂದು ತಿಳಿಸಿತ್ತು.