ಮುಂಬೈ; ಗೋವಾ ಇಂಧನ ಸಚಿವರಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಮುಂಬೈ ಪ್ರವಾಸದಲ್ಲಿದ್ದ ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ...
ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್
ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್
Updated on
ಪಣಜಿ: ಮುಂಬೈ ಪ್ರವಾಸದಲ್ಲಿದ್ದ ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ನಿನ್ನೆಯಷ್ಟೇ ಮುಂಬೈಗೆ ಸಚಿವರು ಭೇಟಿ ನೀಡಿದ್ದರು. ಈ ವೇಳೆ ಇದ್ದಕ್ಕಿದ್ದಂತೆಯ ಅನಾರೋಗ್ಯಕ್ಕೀಡಾದರು. ಸಚಿವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. 
ಪ್ರಸ್ತುತ ಸಚಿವರಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುತ್ತಿದ್ದು, ಆರೋಗ್ಯ ಸ್ಥಿತಿ ಕುರಿತಂತೆ ಮಾಹಿತಿ ತಿಳಿದುಬರಬೇಕಿದೆ ಎಂದು ತಿಳಿಸಿದ್ದಾರೆ. 
ಕೆಲಸದ ನಿಮಿತ್ತ ಸಚಿವರು ಮುಂಬೈಗೆ ಭೇಟಿ ನೀಡಿದ್ದರು. ಮಹಾರಾಷ್ಟ್ರದಲ್ಲಿದ್ದಾಗಲೂ ಆಗಾಗ ಹೃದಯಾಘಾತ ಸಂಭವಿಸುತ್ತಿತ್ತು ಎಂದು ಗೋವಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ತನವಾದೆ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com