ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಗಡಿಯನ್ನು ನಾವು ಸುರಕ್ಷಿತ ಮಾಡಬೇಕು. ಅಪ್ರಚೋದಿತ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡುವಂತೆ ಈಗಾಗಲೇ ಸೇನೆಗೆ ಸೂಚನೆ ನೀಡಿದ್ದಾರೆ. ಅಪ್ರಚೋದಿತ ದಾಳಿಗೆ ಉತ್ತರ ನೀಡದೆ ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ.