ಕಾಶ್ಮೀರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರಣಿ ಇಫ್ತಾರ್ ಕೂಟ ಆಯೋಜಿಸಲು ಮುಸ್ಲಿಂ ರಾಷ್ಟ್ರೀಯ ಮಂಚ್ ನಿರ್ದರಿಸಿದೆ. ಯಾವುದೇ ರಾಜಕೀಯ ಪ್ರಲೋಭನೆಗೆ ಒಳಗಾಗದೇ ಎರಡು ಸಮುದಾಯಗಳು ಸಾಮರಸ್ಯದಿಂದ ಇರಬೇಕು ಎಂಬ ಸಂದೇಶವನ್ನು ಅಯೋಧ್ಯೆಯಲ್ಲಿರುವ ಸ್ವಾಮೀಜಿಗಳು ರವಾನಿಸಿದ್ದಾರೆ.