ಐತಿಹಾಸಿಕ ಮುಘಲ್ ಸರಾಯಿ ರೈಲ್ವೆ ನಿಲ್ದಾಣ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ

ಉತ್ತರ ಪ್ರದೇಶದ ಅತಿ ದೊಡ್ಡ ಜಂಕ್ಷನ್ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಮುಘಲ್ ಸರಾಯಿ ರೈಲ್ವೆ ನಿಲ್ದಾಣಕ್ಕೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಲಖನೌ: ಉತ್ತರ ಪ್ರದೇಶದ ಅತಿ ದೊಡ್ಡ ಜಂಕ್ಷನ್ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಮುಘಲ್ ಸರಾಯಿ ರೈಲ್ವೆ ನಿಲ್ದಾಣಕ್ಕೆ ಆರ್ ಎಸ್ ಎಸ್ ಚಿಂತಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರೈಲ್ವೆ ಜಂಕ್ಷನ್ ಎಂದು ಸೋಮವಾರ ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ.
ಈ ಸಂಬಂಧ ಉತ್ತರ ಪ್ರದೇಶ ಸರ್ಕಾರ ನಿನ್ನೆ ಸಂಜೆ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ಮುಘಲ್ ಸರಾಯಿ ರೈಲ್ವೆ ನಿಲ್ದಾಣವನ್ನು ಮರುನಾಮಕರಣ ಮಾಡಲಾಗಿದೆ ಎಂದು ರಾಜ್ಯಪಾಲರಿಗೆ ಮಾಹಿತಿ ನೀಡಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಐತಿಹಾಸಿಕ ಮತ್ತು ಅತ್ಯಂತ ಹಳೆಯದಾದ ಮುಘಲ್ ಸರಾಯಿ ರೈಲ್ವೆ ನಿಲ್ದಾಣದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಆಕ್ಟೋಬರ್ ನಲ್ಲಿ ಒಪ್ಪಿಗೆ ನೀಡಿತ್ತು.
ಫೆಬ್ರವರಿ 11, 1968ರಲ್ಲಿ ಜನ ಸಂಘ ನಾಯಕ ದೀನ್ ದಯಾಳ್ ಉಪಾಧ್ಯಾಯ ಅವರು ಮುಘಲ್ ಸರಾಯಿ ರೈಲ್ವೆ ನಿಲ್ದಾಣದ ಸಮೀಪ ನಿಗೂಢವಾಗಿ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com