ಭಾರತದ ಗ್ರಾಮ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜೂ.04 ರಂದು ಧ್ವಜ ಸಭೆ (ಫ್ಲಾಗ್ ಮೀಟಿಂಗ್) ನಡೆದಿದ್ದು, ಉಭಯ ದೇಶಗಳ ಅಧಿಕಾರಿಗಳು ಶಾಂತಿ ಕಾಪಾಡುವುದಕ್ಕೆ ಒಪ್ಪಿದ್ದಾರೆ. ಆದರೆ ಈ ವೇಳೆ ಭಾರತ್ದ ಬಿಎಸ್ಎಫ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು ಪ್ರಚೋದಿತ ದಾಳಿ ನಡೆಸಿದರೆ ಪ್ರತೀಕಾರ ತೆಗೆದುಕೊಳ್ಳುವುದು ಖಂಡಿತ ಎಂದು ಹೇಳಿದ್ದಾರೆ,