ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಗ್ಪುರಕ್ಕೆ ತಲುಪಿದ ಪ್ರಣಬ್ ಮುಖರ್ಜಿ

ದೇಶಾದ್ಯಂತ ಬಹು ಚರ್ಚೆಗೆ ಗ್ರಾಸವಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರಕ್ಕೆ ತಲುಪಿಸಿದ್ದಾರೆ.
ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಗ್ಪುರಕ್ಕೆ ತಲುಪಿದ ಪ್ರಣಬ್ ಮುಖರ್ಜಿ
ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಗ್ಪುರಕ್ಕೆ ತಲುಪಿದ ಪ್ರಣಬ್ ಮುಖರ್ಜಿ
Updated on
ನಾಗ್ಪುರ: ದೇಶಾದ್ಯಂತ ಬಹು ಚರ್ಚೆಗೆ ಗ್ರಾಸವಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರಕ್ಕೆ ತಲುಪಿಸಿದ್ದಾರೆ. 
ಜೂ.07 ರಂದು ಆರ್ ಎಸ್ಎಸ್ ಕೇಂದ್ರ ಶಾಖೆಯಲ್ಲಿ ಆರ್ ಎಸ್ಎಸ್ ನ ಸಂಘ್ ಶಿಕ್ಷಾ ವರ್ಗ್ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ  ಮಾಜಿ ರಾಷ್ಟ್ರಪತಿಗಳೂ, ಕಾಂಗ್ರೆಸ್ ನ ನಾಯಕರೂ ಆಗಿದ್ದ ಪ್ರಣಬ್ ಮುಖರ್ಜಿ ಭಾಗವಹಿಸುತ್ತಿರುವುದು ಸೈದ್ಧಾಂತಿಕ ಕಾರಣಗಳಿಂದಾಗಿ ತೀವ್ರ ಚರ್ಚೆಯಾಗಿತ್ತು. 
ಜಾತ್ಯಾತೀತತೆಯ ಕಾರಣಗಳಿಂದಾಗಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ನಾಯಕರು ಪ್ರಣಬ್ ಮುಖರ್ಜಿ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖರ್ಜಿ ತಾವು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ವ್ಯಕ್ತವಾದ ಆಕ್ಷೇಪಕ್ಕೆ ನಾಗ್ಪುರದಲ್ಲೇ ಉತ್ತರಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾಳಿನ ಕಾರ್ಯಕ್ರಮ ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com