ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಉತ್ತಮ: ಬಿಜೆಪಿ ಶಾಸಕ

ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಉತ್ತರ ಪ್ರದೇಶ ಶಾಸಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ...
ಸುರೇಂದ್ರ ಸಿಂಗ್
ಸುರೇಂದ್ರ ಸಿಂಗ್
ಉತ್ತರ ಪ್ರದೇಶ: ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಉತ್ತರ ಪ್ರದೇಶ ಶಾಸಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. 
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರು ಉತ್ತಮ. ವೇಶ್ಯೆಯರು ನಮ್ಮಿಂದ ಹಣ ಪಡೆದು ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ಈ ಸರ್ಕಾರಿ ಅಧಿಕಾರಿಗಳು ನಮ್ಮಿಂದ ಹಣ ತೆಗೆದುಕೊಂಡ ನಂತರ ಕೆಲಸ ಪೂರ್ತಿಗೊಳಿಸುತ್ತಾರೆ ಎಂಬ ಯಾವ ನಿರೀಕ್ಷೆಯೂ ಇರಲ್ಲ ಎಂದಿದ್ದಾರೆ.
ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲೇನೂ ಅಲ್ಲ. ಫೆಬ್ರುವರಿಯಲ್ಲಿ ರಾಟ್ಸಾದ್‌ನಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, ‘ಭಾರತ್‌ ಮಾತಾ ಕಿ ಜೈ’, ‘ವಂದೇ ಮಾತರಂ’ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ‌ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು ಎಂಬ ಹೇಳಿಕೆ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com