ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ರಜನಿಕಾಂತ್ ಅವರು, ಹೆಚ್.ಡಿ.ಕುಮಾರಸ್ವಾಮಿಯವರ ಪರಿಸ್ಥಿತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಇದು ಕರ್ನಾಟಕಕ್ಕೆ ಒಳ್ಳೆಯದಲ್ಲ. ಇಡೀ ವಿಶ್ವದಾದ್ಯಂತ ಚಿತ್ರ ಬಿಡುಗಡೆಗೊಳ್ಳುತ್ತಿರುವಾಗ, ಕರ್ನಾಟಕದಲ್ಲಿ ಮಾತ್ರ ಚಿತ್ರಕ್ಕೆ ನಿಷೇಧ ಹೇರಿದರೆ, ವಿಚಾರ ದೊಡ್ಡ ಮಟ್ಟದ್ದಾಗುತ್ತದೆ ಎಂದು ಹೇಳಿದ್ದಾರೆ.