ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಮಾಧುರಿ , ಲತಾ ಮಂಗೇಶ್ಕರ್ ಭೇಟಿ ಮಾಡಿದ ಅಮಿತ್ ಶಾ

ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದು ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಮಿತ್ ಶಾ, ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆ, ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನವೀಸ್
ಅಮಿತ್ ಶಾ, ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆ, ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನವೀಸ್
ಮುಂಬೈ: ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ  ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಅಮಿತ್ ಶಾ ಅವರಿಂದು   ಬಾಲಿವುಡ್ ನಟಿ ಮಾಧುರಿ ದೀಕ್ಷಿತ್,  ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ  ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು  ಜನರಿಗೆ ತಲುಪಿಸುವ ನಿಟ್ಟಿನಲ್ಲಿ  ಸಮರ್ಥನೆಗಾಗಿ ಸಂಪರ್ಕ ಅಭಿಯಾನ ಆಯೋಜಿಸಲಾಗಿದ್ದು,  ಮೋದಿ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು  ಭೇಟಿಯಾದ ಗಣ್ಯರಿಗೆ ಅಮಿತ್ ಶಾ ನೀಡಿದರು.
ಈ ಮಧ್ಯೆ  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರನ್ನು ಭೇಟಿ ಮಾಡಿ 2019ರ ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಬಿಜೆಪಿ- ಹಾಗೂ ಶಿವಸೇನಾ ನಡುವಿನ ಮೈತ್ರಿ ಸಂಬಂಧವೂ ಮಾತುಕತೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com