ಮುಂಬೈ: 2019ರ ಲೋಕಸಭಾ ಚುನಾವಣೆಯಲ್ಲಿ ಶಿವಸೇನಾ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದೆ.
ಇತ್ತೀಚಿಗೆ ನಡೆದ ಪಲ್ಗರ್ ಉಪಚುನಾವಣೆಯ ಫಲಿತಾಂಶದಿಂದ ಚುನಾವಣಗೆ ಸ್ಪರ್ಧಿಸಲು ಯಾವುದೇ ಪೋಸ್ಟರ್ ಬಾಯ್ ( ಪ್ರಧಾನಮಂತ್ರಿ ನರೇಂದ್ರಮೋದಿ )ಅಗತ್ಯ ಇಲ್ಲ ಎಂಬ ಸಂದೇಶ ತಿಳಿದುಬಂದಿದೆ ಎಂದು ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದೆ.
ಬಿಜೆಪಿ ಇತ್ತೀಚಿಗೆ ಹಮ್ಮಿಕೊಂಡಿರುವ ಸಮರ್ಥನೆಗಾಗಿ ಸಂಪರ್ಕ ಅಭಿಯಾನವನ್ನು ಕೂಡಾ ಪರೋಕ್ಷವಾಗಿ ಶಿವಸೇನಾ ಟೀಕಿಸಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈ ಅಭಿಯಾನವನ್ನು ಪ್ರೋತ್ಸಾಹಿಸುತ್ತಿದ್ದು, ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದ್ದರೂ ಏಕೆ ಅಭಿಯಾನವನ್ನು ನಡೆಸುತ್ತಿದೆ ಎಂದು ಹೇಳಿದೆ.
ಪಲ್ಗರ್ ಉಪಚುನಾವಣೆಯಲ್ಲಿ ಪಕ್ಷದ ಸಾಮರ್ಥ ಏನು ಎಂಬುದು ಗೊತ್ತಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದರೂ ಜನರ ಜೊತೆಗಿನ ಸಂಪರ್ಕವನ್ನು ಕಡಿತಗೊಳಿಸಿಕೊಂಡಿದೆ. ಶಿವಸೇನಾ ಜನಸಂಪರ್ಕ ಹಾಗೂ ಜನಾಧಾರ್ ಮೂಲಕ ಜನರ ನಡುವಿದ್ದು, ಯಾರ ಸಹಾಯವಿಲ್ಲದೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.
Advertisement