ಆದರೆ ರಾಜಭವನದ ಮೂಲಗಳ ಪ್ರಕಾರ ರಾಜ್ಯಪಾಲರಿಗೆ ಬರುವ ಸಾರ್ವಜನಿಕ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳಿಸಲಾಗುತ್ತದೆ, ಇದೊಂದು ಸಾಮಾನ್ಯ ಪ್ರಕ್ರಿಯೆಯಾಗಿದೆ, ಅದರಂತೆಯೇ ಈಗಲೂ ಪತ್ರವನ್ನು ಕಳಿಸಲಾಗಿದೆ. ಅಖಿಲೇಶ್ ಯಾದವ್ ಸಿಎಂ ಆಗಿದ್ದಾಗಲೂ ಇಂಥಹದ್ದೇಪ್ರಕರಣ ನಡೆದಿತ್ತು. ಆಗಲೂ ಹಿರಿಯ ಐಎಎಸ್ ಅಧಿಕಾರಿಯಾಗಿದ್ದವರ ವಿರುದ್ಧ ಬಂದಿದ್ದ ಅನಾಮಧೇಯ ಪತ್ರ ಎಸ್ ಪಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು.