ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ಜತೆಗಿನ ಮಹಾಮೈತ್ರಿ ತೊರೆದು ಎನ್ಡಿಎ ತೆಕ್ಕೆಗೆ ಸೇರಿದ ನಿತೀಶ್ ಕುಮಾರ್ ಅವರ ನಿಲುವನ್ನು ಶರದ್ ಯಾದವ್ ಬಹಿರಂಗವಾಗಿ ಟೀಕಿಸಿದ್ದರು. ಈ ಬೆಳವಣಿಗೆಯ ನಂತರ ಇಬ್ಬರು ನಾಯಕರು ಮುನಿಸಿಕೊಂಡಿದ್ದರು. ಶರದ್ ವಿರೋಧ ಪಕ್ಷಗಳ ಜತೆ ಗುರುತಿಸಿಕೊಂಡಿದ್ದರು. ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸಾಲಿನಲ್ಲಿ ಕುಳಿತ ಅವರು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.