ಗುರುವಾರ ಮುಂಬೈನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಉದ್ಧವ್ ಠಾಕ್ರೆ ಭೇಟಿಯ ಅಜೆಂಡಾ ಏನು ಎಂಬುದು ನಮಗೆ ಗೊತ್ತಿದೆ. ನಾವು ಈ ಹಿಂದೆ ತೆಗೆದುಕೊಂಡಿದ್ದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ನಾವು ಎನ್ ಡಿಎ ಮೈತ್ರಿಕೂಟ ಸೇರದೇ ಏಕಾಂಗಿ ಸ್ಪರ್ಧೆ ಮಾಡುತ್ತೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.