ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ನಲ್ಲಿ ಹಲವು ದಲಿತ ಕಾರ್ಯಕರ್ತರು ಭಾಗಿಯಾಗಿದ್ದರು. ಪ್ರಧಾನಿಯ ಹತ್ಯೆಗೆ ಸಂಚು ರೂಪಿಸಿರುವ ಸಮಾಜಘಾತುಕ, ರಾಷ್ಟ್ರವಿರೋಧಿಗಳನ್ನು ಖಂಡಿಸುತ್ತೇವೆ ಎಂದು ಅಠಾವಳೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಮಂತ್ರದೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ, ಅವರು ಕೇವಲ ಒಂದು ಧರ್ಮದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂಬ ಆರೋಪ ತಪ್ಪು ಎಂದು ಅಠಾವಳೆ ತಿಳಿಸಿದ್ದಾರೆ.