ಇನ್ನು ಇದೇ ವೇಳೆ ನಿನ್ನೆಯ ಟ್ವೀಟ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು, ನನ್ನ ಮಗಳು ಕೂಡ ಚರ್ಚೆ ಮಾಡುತ್ತಿರುತ್ತಾಳೆ. ಅವರ ಆಲೋಚನಾ ಲಹರಿಗೂ ನನ್ನ ಆಲೋಚನಾ ಲಹರಿಗೂ ಅಜಗಜಾಂತರ ವ್ಯತ್ಯಾಸವಿದೆ. ನನ್ನ ಸ್ವಂತ ಮಗಳೇ ನನ್ನ ಮಾತು ಕೇಳುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಇಂದು ಪ್ರತಿಕ್ರಿಯೆ ನೀಡಿರುವ ಶರ್ಮಿಷ್ಟಾ, ಹೌದು.. ನಾನು ಕೂಡ ಹಾಗೆಯೇ ಬೆಳೆದಿದ್ದು. ನನ್ನ ಭಾವನೆಗಳನ್ನು ನಾನು ಯಾವುದೇ ಮುಚ್ಚು ಮರೆ ಇಲ್ಲದೆ ಮುಜುಗರವಿಲ್ಲದೆ ಸಾರ್ವಜನಿಕವಾಗಿಯೇ ವ್ಯಕ್ತಪಡಿಸುತ್ತೇನೆ. ನಾವು ಪ್ರಜಾಪ್ರಭುತ್ವ ವಾದಿಗಳು. ನಮ್ಮದು ಚರ್ಚೆ ಮಾಡದೇ ಯಾವುದೇ ನಿರ್ಧಾರ ಕೈಗೊಳ್ಳದ ಕುಟುಂಬ, ಚರ್ಚೆ ಮಾಡುವ ನನ್ನ ಗುಣ ನಮ್ಮ ತಂದೆಯಿಂದ ಬಂದಿದ್ದು ಎಂದು ಹೇಳಿದ್ದಾರೆ.