ಪ್ರಧಾನಿ ಮೋದಿ ಹತ್ಯೆಗೆ ನಿತಿನ್ ಗಡ್ಕರಿಯಿಂದ ಸಂಚು: ಶೆಹ್ಲಾ ರಶೀದ್ ಟ್ವೀಟ್ ವಿವಾದ

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಹತ್ಯೆಯಂತೆ ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ...
ನಿತಿನ್ ಗಡ್ಕರಿ, ನರೇಂದ್ರ ಮೋದಿ
ನಿತಿನ್ ಗಡ್ಕರಿ, ನರೇಂದ್ರ ಮೋದಿ
ನವದೆಹಲಿ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಹತ್ಯೆಯಂತೆ ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಹಿರಂಗದ ಬೆನ್ನಲ್ಲೇ ಶೆಹ್ಲಾ ರಶೀದ್ ಎಂಬುವರು ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. 
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ಇದಕ್ಕೆ ಪ್ರತಿಯಾಗಿ ನಿತಿನ್ ಗಡ್ಕರಿ ಶೆಹ್ಲಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ. 
ಶೆಹ್ಲಾ ತಮ್ಮ ಟ್ವೀಟರ್ ನಲ್ಲಿ ಆರ್ಎಸ್ಎಸ್ ಮತ್ತು ಗಡ್ಕರಿ ಅವರನ್ನು ನೋಡಿದರೆ ಮೋದಿ ಅವರನ್ನು ಕೊಲ್ಲಲು ಸಂಚು ರೂಪಿಸಿದವರಂತೆ ಕಾಣುತ್ತಾರೆ. ನಂತರ ಅದನ್ನು ಮುಸ್ಲಿಂ ಹಾಗೂ ಕಮ್ಯೂನಿಸ್ಟ್ ಗಳ ಮೇಲೆ ಹೊರಿಸಿ, ಬಳಿಕ ಮುಸ್ಲಿಂರನ್ನು ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಗಲ್ಲಿಗೇರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಟ್ವೀಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com