ಉಗ್ರರ ಹೆಡೆ ಮುರಿ ಕಟ್ಟಿದ ಭಾರತೀಯ ಸೇನೆ, ಗಡಿದಾಟಲು ಯತ್ನಿಸಿದ 6 ಉಗ್ರರ ಸಾವು!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ನಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಗಡಿಯಿಂದ ಮೂವರು ಉಗ್ರರು ಭಾರತದ ಗಡಿಯೊಳಗೆ ನುಸುಳುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನೆಯ ಸಿಬ್ಬಂದಿ ಇದನ್ನು ಗಮನಿಸಿ ಕೂಡಲೇ ಗುಂಡು ಹಾರಿಸಿದ್ದಾರೆ. ಉಗ್ರರು ಕೂಡ ಪ್ರತಿದಾಳಿ ಮಾಡಿದ್ದು, ಕೂಡಲೇ ಯೋಧರು ಸುತ್ತುವರೆದು ಗುಂಡಿನ ದಾಳಿ ಆರಂಭಿಸಿದ್ದಾರೆ. 
ಯೋಧರ ಗುಂಡಿನ ದಾಳಿಯಲ್ಲಿ 6 ಉಗ್ರರು ಹತರಾಗಿದ್ದು, ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ಇದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದೆ. ಈಗಲೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ದಾಳಿ ವೇಳೆ ಸೈನಿಕರಿಗೆ ಗಾಯಗಳಾದ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com