ಸಿಎಂ ನೀಡಿದ ಚೆಕ್ ಸ್ವೀಕರಿಸಿದ ವಿದ್ಯಾರ್ಥಿಗಳು ಖುಷಿಯಿಂದಲೇ ಮನೆಯತ್ತ ಹೆಜ್ಜೆ ಹಾಕಿದ್ದರು. ಆದರೆ ಈ ಪೈಕಿ ವಿದ್ಯಾರ್ಥಿ ಅಲೋಕ್ ಮಿಶ್ರಾ ಸಿಎಂ ನೀಡಿದ್ದ ಚೆಕ್ ಅನ್ನು ಬ್ಯಾಂಕಿಗೆ ಹಾಕಿ ಹಣ ಪಡೆಯಲು ಮುಂದಾಗಿದ್ದು, ಈ ವೇಳೆ ಚೆಕ್ ಬೌನ್ಸ್ ಆಗಿದೆ. ಚೆಕ್ ನಲ್ಲಿರುವ ಸಹಿ ಸರಿಯಿಲ್ಲ ಎಂದು ಹೇಳಿ ಬ್ಯಾಂಕಿನವರು ಚೆಕ್ ತಿರಸ್ಕರಿಸಿದ್ದು ಮಾತ್ರವಲ್ಲದೇ, ಚೆಕ್ ಬೌನ್ಸ್ ಆಗಿದ್ದಕ್ಕೇ ವಿದ್ಯಾರ್ಥಿಯೇ ದಂಡ ಪಾವತಿಸಬೇಕು ಎಂದು ಹೇಳಿದ್ದಾರೆ. ಚೆಕ್ ನಲ್ಲಿ ಬಾರಾಬಂಕಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರ ಸಹಿ ಇದ್ದು, ಈ ಸಹಿಯೇ ಸರಿ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ವಾದಿಸಿದ್ದಾರೆ.