ತೀವ್ರ ಗಾಯಗೊಂಡಿರುವ ಕಸೀಫ್ ಜಮೀಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದ ಅವರಿಗೆ ಗೋರಖ್ ನಾಥ ದೇವಸ್ಥಾನ ಬಳಿ ಗುಂಡು ಹಾರಿಸಲಾಗಿದೆ. ಮೂರು ಗುಂಡು ನೇರವಾಗಿ ಕತ್ತು ಮತ್ತು ತೋಳಿಗೆ ಗಾಯಗಳಾಗಿವೆ. ಪ್ರಸ್ತುತ ಜಮೀಲ್ ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನುವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಜಮೀಲ್ ಅವರು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು.