ಆಂದೋಲನದ ಮೊದಲ ಭಾಗವಾಗಿ ಜೂನ್ 17ರಿಂದ ಜೂನ್ 24ರ ವರೆಗೆ ಆಪ್ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ದೆಹಲಿಯಲ್ಲಿ 300 ಸ್ಥಳಗಳಲ್ಲಿ ಸಭೆ ನಡೆಸಲಿದ್ದಾರೆ. ಎರಡನೇ ಹಂತದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಜುಲೈ 1ರಂದು ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.