ತಮ್ಮ ವಿರುದ್ಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾನೂನು ಕ್ರಮದ ಎಚ್ಚರಿಕೆ ನೀಡಿ ಟ್ವೀಟ್ ಮಾಡಿದ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ದೊಡ್ಡ ಪಕ್ಷದ ನಾಯಕರಾಗಿರುವವರು ವ್ಯಂಗ್ಯಭರಿತ ಮಾತಿನ ಬಗ್ಗೆ ಕಾರ್ಯಪ್ರವೃತ್ತರಾಗುತ್ತಾರೆ. ಆದರೆ, ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರು ಎಚ್ಚರವಹಿಸಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.