ಲಖನೌ: ತಮ್ಮ ವಿರುದ್ಧದ ಸರ್ಕಾರಿ ಬಂಗಲೆ ವಿರೂಪ ವಿವಾದದ ಹಿಂದೆ ಬಿಜೆಪಿಯ ಕುತಂತ್ರವಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ತಮ್ಮಗಿಂತಲೂ ಮುಂಚಿತವಾಗಿ ಏಕೆ ಇಬ್ಬರು ರಾಜ್ಯ ಅಧಿಕಾರಿಗಳು ಈ ಬಂಗಲೆಯೊಳಗೆ ಪ್ರವೇಶಿಸಿದ್ದರು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ವಿವಾದಕ್ಕೆ ಸಂಬಂಧಿಸಿದಂತೆ ಅಲ್ಲಿನ ರಾಜ್ಯಪಾಲರ ವಿರುದ್ಧವೂ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಅವರೊಬ್ಬರು ಆರ್ ಎಸ್ ಎಸ್ ನ ಆತ್ಮವಿದ್ದಂತೆ ಎಂದು ಆರೋಪಿಸಿದ್ದಾರೆ.
ಮಾಧ್ಯಮಗಳಿಗೆ ಮನೆ ತೋರುವ ಮುನ್ನ ಮುಖ್ಯಮಂತ್ರಿಗಳ ಆಪ್ತ ಅಧಿಕಾರಿ ಅಭಿಷೇಕ್ ಹಾಗೂ ಐಎಎಸ್ ಅಧಿಕಾರಿ ಮೃತ್ಯುಂಜಯ್ಯ ನಾರಾಹಿಣ್ ಏಕೆ ತಮ್ಮ ಮನೆಯೊಳಗೆ ಪ್ರವೇಶಿಸಿದ್ದರು ಎಂದು ಅವರು ಪ್ರಶ್ನಿಸಿದ್ದು, ವರದಿಗಾಗಿ ಕಾಯುತ್ತಿರುವುದಾಗಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
Advertisement