ದಲಿತ ಬಾಲಕರನ್ನು ನಗ್ನಗೊಳಿಸಿ ಹಿಂಸೆ 'ಅಮಾನವೀಯ': ಇದಕ್ಕೆ ಬಿಜೆಪಿ, ಆರ್‌ಎಸ್‌ಎಸ್ ಕಾರಣ ಎಂದ ರಾಹುಲ್

ಮೇಲ್ಜಾತಿಯ ಕೃಷಿಕನ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಾಡಿದ ಮೂವರು ದಲಿತ ಬಾಲಕರನ್ನು ನಗ್ನಗೊಳಿಸಿ ಅವರನ್ನು ಥಳಿಸಿ ಹಿಂಸೆ ನೀಡಿರುವುದನ್ನು...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಜಳಗಾಂವ್ (ಮಹಾರಾಷ್ಟ್ರ): ಮೇಲ್ಜಾತಿಯ ಕೃಷಿಕನ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಾಡಿದ ಮೂವರು ದಲಿತ ಬಾಲಕರನ್ನು ನಗ್ನಗೊಳಿಸಿ ಅವರನ್ನು ಥಳಿಸಿ ಹಿಂಸೆ ನೀಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರಣ ಎಂದು ಹೇಳಿದ್ದಾರೆ. 
ಮಹಾರಾಷ್ಟ್ರದ ಜಳಗಾಂವ್ ನಲ್ಲಿ ಈ ಘಟನೆ ನಡೆಸಿದ್ದು ದೇಶಾದ್ಯಂತ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಆರ್‌ಎಸ್‌ಎಸ್ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ. 
ಬಿಜೆಪಿ ಮತ್ತು ಆರ್‌ಎಸ್‌ಎಸ್ ನ ದ್ವೇಷ ರಾಜಕಾರಣದ ವಿರುದ್ಧ ನಾವು ಧ್ವನಿ ಎತ್ತದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟರ್ ಖಾತೆಯಲ್ಲಿ ದಲಿತ ಬಾಲಕರ ಮೇಲೆ ಮೇಲ್ಜಾತಿಯವರಿಂದ ನಡೆದ ಹಿಂಸೆ ದೌರ್ಜನ್ಯದ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com