ಜಳಗಾಂವ್ (ಮಹಾರಾಷ್ಟ್ರ): ಮೇಲ್ಜಾತಿಯ ಕೃಷಿಕನ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಾಡಿದ ಮೂವರು ದಲಿತ ಬಾಲಕರನ್ನು ನಗ್ನಗೊಳಿಸಿ ಅವರನ್ನು ಥಳಿಸಿ ಹಿಂಸೆ ನೀಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದಕ್ಕೆ ಆರ್ಎಸ್ಎಸ್ ಮತ್ತು ಬಿಜೆಪಿ ಕಾರಣ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಜಳಗಾಂವ್ ನಲ್ಲಿ ಈ ಘಟನೆ ನಡೆಸಿದ್ದು ದೇಶಾದ್ಯಂತ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಆರ್ಎಸ್ಎಸ್ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.
ಬಿಜೆಪಿ ಮತ್ತು ಆರ್ಎಸ್ಎಸ್ ನ ದ್ವೇಷ ರಾಜಕಾರಣದ ವಿರುದ್ಧ ನಾವು ಧ್ವನಿ ಎತ್ತದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟರ್ ಖಾತೆಯಲ್ಲಿ ದಲಿತ ಬಾಲಕರ ಮೇಲೆ ಮೇಲ್ಜಾತಿಯವರಿಂದ ನಡೆದ ಹಿಂಸೆ ದೌರ್ಜನ್ಯದ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ.
महाराष्ट्र के इन दलित बच्चों का अपराध सिर्फ इतना था कि ये एक "सवर्ण" कुएं में नहा रहे थे।
आज मानवता भी आखरी तिनकों के सहारे अपनी अस्मिता बचाने का प्रयास कर रही है।
RSS/BJP की मनुवाद की नफरत की जहरीली राजनीति खिलाफ हमने अगर आवाज़ नहीं उठाई तो इतिहास हमें कभी माफ नहीं करेगा pic.twitter.com/STeBSkI1q1