ದೇಶ
ನನ್ನ ವೈಯಕ್ತಿಕ ಲಾಭಕ್ಕಾಗಿ ಪ್ರತಿಭಟನೆ ನಡೆಸುತ್ತಿಲ್ಲ: ದೆಹಲಿ ಸಿಎಂ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ವೈಯಕ್ತಿಕ ಲಾಭಕ್ಕಾಗಿ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.
ನವದೆಹಲಿ: ಐಎಎಸ್ ಅಧಿಕಾರಿಗಳ ಪ್ರತಿಭಟನೆಯನ್ನು ಅಂತ್ಯಗೊಳಿಸಬೇಕೆಂದು ಆಗ್ರಹಿಸಿ ಲೆಫ್ಟಿನೆಂಟ್ ಗೌರ್ನರ್ ನಿವಾಸದಲ್ಲಿ ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ವೈಯಕ್ತಿಕ ಲಾಭಕ್ಕಾಗಿ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.
ತಮ್ಮ ವಿಡಿಯೋ ಸಂದೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಅರವಿಂದ್ ಕೇಜ್ರಿವಾಲ್, ದೆಹಲಿ ಸರ್ಕಾರದ ಕಾರ್ಯನಿರ್ವಹಣೆಗೆ ಬಿಜೆಪಿ ಅಡ್ಡಿಮಾಡುತ್ತಿದೆ, ನಾನು ನನ್ನ ವೈಯಕ್ತಿಕ ಲಾಭಕ್ಕಾಗಿ ಪ್ರತಿಭಟನೆ ನಡೆಸುತ್ತಿಲ್ಲ, ದೆಹಲಿಯ ಜನತೆಗಾಗಿ ಪ್ರತಿಭಟನೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಐಎಎಸ್ ಅಧಿಕಾರಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗೌರ್ನರ್ ಜೊತೆ ಮಾತನಾಡಿದ್ದೇನೆ, ದೆಹಲಿ ಉಪಮುಖ್ಯಮಂತ್ರಿ ಮನೋಷ್ ಸಿಸೋಡಿಯಾ ಅನಿಲ್ ಬೈಜಲ್ ಗೆ ಪತ್ರವನ್ನೂ ಬರೆದಿದ್ದಾರೆ. ಅಷ್ಟೇ ಅಲ್ಲದೇ ವಾಟ್ಸ್ ಆಪ್ ನಲ್ಲಿಯೂ ಮೆಸೇಜ್ ಕಳಿಸಿದ್ದಾರೆ, ಆದರೆ ಲೆಫ್ಟಿನೆಂಟ್ ಗೌರ್ನರ್ ನಿಂದ ಉತ್ತರ ಬಂದಿಲ್ಲ ಎಂದು ಹೇಳಿದ್ದಾರೆ.