ತಮ್ಮ ಅಧಿಕೃತ ನಿವಾಸದಲ್ಲೇ ಔತಣ ಕೂಟ ಆಯೋಜಿಸಿದ್ದು, 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಔತಣಕೂಟದ ಆಯೋಜನೆ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ವೇಳೆ ಆರ್ ಎಸ್ಎಸ್ ಹಾಗೂ ಸಂಘಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಹರ್ಯಾಣದ ಸೂರಜ್ ಕುಂಡ್ ನಲ್ಲಿ ಸಭೆ ಸೇರಿದ್ದು, ಎರಡು ದಿನಗಳು ನಡೆಯಲಿರುವ ಸಭೆಯಲ್ಲಿ ಆರ್ ಎಸ್ಎಸ್ ನ ಸಹ ಸಂಘಟನೆಗಳ ನಡುವಿನ ಸಮನ್ವಯತೆ ಹಾಗೂ 2019 ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಹತ್ವವೆನಿಸುವ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.