ಆರ್ ಎಸ್ಎಸ್, ಬಿಜೆಪಿ ನಾಯಕರಿಗೆ ಔತಣಕೂಟ ಆಯೋಜಿಸಲಿರುವ ಪ್ರಧಾನಿ ಮೋದಿ
ಆರ್ ಎಸ್ಎಸ್, ಬಿಜೆಪಿ ನಾಯಕರಿಗೆ ಔತಣಕೂಟ ಆಯೋಜಿಸಲಿರುವ ಪ್ರಧಾನಿ ಮೋದಿ

ಆರ್ ಎಸ್ಎಸ್, ಬಿಜೆಪಿ ನಾಯಕರಿಗೆ ಔತಣಕೂಟ ಆಯೋಜಿಸಲಿರುವ ಪ್ರಧಾನಿ ಮೋದಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಸಂಘಪರಿವಾರ, ಬಿಜೆಪಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಔತಣ ಕೂಟ ಆಯೋಜಿಸಿದ್ದಾರೆಂದು ತಿಳಿದುಬಂದಿದೆ.
Published on
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಸಂಘಪರಿವಾರ, ಬಿಜೆಪಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಔತಣ ಕೂಟ ಆಯೋಜಿಸಿದ್ದಾರೆಂದು ತಿಳಿದುಬಂದಿದೆ. 
ತಮ್ಮ ಅಧಿಕೃತ ನಿವಾಸದಲ್ಲೇ ಔತಣ ಕೂಟ ಆಯೋಜಿಸಿದ್ದು, 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಔತಣಕೂಟದ ಆಯೋಜನೆ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ವೇಳೆ ಆರ್ ಎಸ್ಎಸ್ ಹಾಗೂ ಸಂಘಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಹರ್ಯಾಣದ ಸೂರಜ್ ಕುಂಡ್ ನಲ್ಲಿ ಸಭೆ ಸೇರಿದ್ದು, ಎರಡು ದಿನಗಳು ನಡೆಯಲಿರುವ ಸಭೆಯಲ್ಲಿ ಆರ್ ಎಸ್ಎಸ್ ನ ಸಹ ಸಂಘಟನೆಗಳ ನಡುವಿನ ಸಮನ್ವಯತೆ ಹಾಗೂ 2019 ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಹತ್ವವೆನಿಸುವ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. 
ಹರ್ಯಾಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬಿಜೆಪಿಯ ನಾಯಕರೂ ಭಾಗಾವಹಿಸಲಿದ್ದು, ಆರ್ ಎಸ್ಎಸ್ ನ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯ್ಯಾಜಿ ಜೋಷಿ, ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೋಪಾಲ್ ಭಾಗಿಯಾಗಿದ್ದಾರೆ. ಬಿಜೆಪಿ ಅಮಿತ್ ಶಾ ಸಹ ಹರ್ಯಾಣಗೆ ತೆರಳಿ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com