ಭಾರತ ಘೋಷಣೆ ಮಾಡಿದ್ದ ಏಕಪಕ್ಷೀಯ ಕದನ ವಿರಾಮಕ್ಕೆ ಈ ಹಿಂದೆ ಪಾಕಿಸ್ತಾನ ಕೂಡ ಒಪ್ಪಿಗೆ ನೀಡಿತ್ತು. ಆದರೆ, ಪಾಕ್ ಪೋಷಿತ ಭಯೋತ್ಪಾದಕರಿಗೆ ಇದು ಭಯೋತ್ಪಾದನೆಯ ಸುಗ್ಗಿ ಕಾಲದಂತಾಗಿ ಮಾರ್ಪಟ್ಟಿದೆ. ರಂಜಾನ್ ಕದನ ವಿರಾಮ ಘೋಷಣೆಯ ನಂತರ ಕಾಶ್ಮೀರಿ ಕಣಿವೆಯಲ್ಲಿ ಅತಿ ಹೆಚ್ಚು ಹಿಂಸಾಚಾರ ನಡೆದಿದ್ದು, ಮೊನ್ನೆಯಷ್ಟೇ ಪತ್ರಿಕಾ ಸಂಪಾದಕರೊಬ್ಬರನ್ನು ಹಾಗೂ ಸೇನಾಧಿಕಾರಿಯೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಭದ್ರತಾ ಸಂಸ್ಥೆಗಳು ಕದನ ವಿರಾಮ ಮುಂದುವರೆಸುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಹೇಳಲಾಗುತ್ತಿದೆ.