ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು
ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು

ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು

ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಸಂಭವಿಸಿದೆ.
Published on
ಚಿತ್ತೂರು(ಆಂಧ್ರ ಪ್ರದೇಶ): ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ  ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ  ಸಂಭವಿಸಿದೆ.
ಭಾನುವಾರ ಬೆಳಗಿನ ಜಾವ ನಡೆದ ಈ ಅವಘಡದಲ್ಲಿ ಸಾವನ್ನಪ್ಪಿದವರೆಲ್ಲಾ ತಮಿಳುನಾಡಿಗೆ ಕೊತ್ತಪೇಟೆ ಗೆ ಸೇರಿದ ಕೂಲಿ ಕಾರ್ಮಿಕರಾಗಿದ್ದಾರೆ. ಇದೇ ವೇಳೆ ಲಾರಿಯಲ್ಲಿದ್ದ ಹದಿನೈದಕ್ಕೂ ಹೆಚ್ಚಿನ ಕಾರ್ಮಿಕರು ಗಾಯಗೊಂಡಿದ್ದಾರೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದು ಗಾಯಾಳುಗಳನ್ನು ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ.
ಕುಪ್ಪಂ ಪೊಲೀಸರುಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರ್ತಿಗೆ ಸಮ್ಮತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com