ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು

ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಸಂಭವಿಸಿದೆ.
ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು
ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು
ಚಿತ್ತೂರು(ಆಂಧ್ರ ಪ್ರದೇಶ): ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ  ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ  ಸಂಭವಿಸಿದೆ.
ಭಾನುವಾರ ಬೆಳಗಿನ ಜಾವ ನಡೆದ ಈ ಅವಘಡದಲ್ಲಿ ಸಾವನ್ನಪ್ಪಿದವರೆಲ್ಲಾ ತಮಿಳುನಾಡಿಗೆ ಕೊತ್ತಪೇಟೆ ಗೆ ಸೇರಿದ ಕೂಲಿ ಕಾರ್ಮಿಕರಾಗಿದ್ದಾರೆ. ಇದೇ ವೇಳೆ ಲಾರಿಯಲ್ಲಿದ್ದ ಹದಿನೈದಕ್ಕೂ ಹೆಚ್ಚಿನ ಕಾರ್ಮಿಕರು ಗಾಯಗೊಂಡಿದ್ದಾರೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದು ಗಾಯಾಳುಗಳನ್ನು ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ.
ಕುಪ್ಪಂ ಪೊಲೀಸರುಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರ್ತಿಗೆ ಸಮ್ಮತಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com