ಕೇಜ್ರಿವಾಲ್ ಅವರು ಧರಣಿ ನಡೆಸುತ್ತಿರುವುದೇ ಆದರೆ, ಅದು ಕಚೇರಿಯ ಹೊರಗಿರಬೇಕು ಎಂದು ದೆಹಲಿ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರಿಗೆ ನ್ಯಾಯಪೀಠ ತಿಳಿಸಿದೆ.
ಕೇಜ್ರಿವಾಲ್ ನಡೆಸುತ್ತಿರುವ ಧರಣಿ ವಿರುದ್ಧ ದೆಹಲಿ ವಿಧಾಸಭೆ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಅವರೂ ಕೂಡ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಕುರಿತ ಅರ್ಜಿ ವಿಚಾರಣೆಯನ್ನು ಜೂನ್.22ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಇನ್ನು ಐಎಎಸ್ ಅಧಿಕಾರಿಗಳ ಪ್ರತಿಭಟನೆ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಪೀಠ, ಐಎಎಸ್ ಅಧಿಕಾರಿಗಳನ್ನು ಪ್ರತಿನಿಧಿಸುತ್ತಿರುವ ಸಂಘಟನೆಯನ್ನು ಕೂಡ ಕಕ್ಷಿದಾರನಾಗಿ ಮಾಡಬೇಕೆಂದು ತಿಳಿಸಿದೆ.