ಕೇಜ್ರಿವಾಲ್ ಧರಣಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಕೇಜ್ರಿವಾಲ್ ಹಾಗೂ ಅವರ ಸಂಪುಟದ ಮುಖಂಡರು ನಡೆಸುತ್ತಿರುವ ಧರಣಿ ಅಸಾಂವಿಧಾನಿಕವಾದದ್ದು ಎಂದು ಹೇಳಿದೆ. ಅಲ್ಲದೆ, ಈ ಕುರಿತ ಅರ್ಜಿಯನ್ನು ಬೇಸಿಗೆ ರಜೆ ಬಳಿಕ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.