2014ರಲ್ಲಿ ಆದಂತೆ 2019ರಲ್ಲಿ ಆಗಲು ಬಿಡುವುದಿಲ್ಲ: ಶಿವಸೇನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರವಾಗಿ ಕಿಡಿಕಾರಿದ್ದು, 2014ರ ಚುನಾವಣೆಯಲ್ಲಿ ಆದಂತೆ 2019ರ ಚುನಾವಣೆಯಲ್ಲಿ ಆಗಲು ಬಿಡುವುದಿಲ್ಲ ಎಂದು ಮಂಗಳವಾರ ಹೇಳಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ; ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರವಾಗಿ ಕಿಡಿಕಾರಿದ್ದು, 2014ರ ಚುನಾವಣೆಯಲ್ಲಿ ಆದಂತೆ 2019ರ ಚುನಾವಣೆಯಲ್ಲಿ ಆಗಲು ಬಿಡುವುದಿಲ್ಲ ಎಂದು ಮಂಗಳವಾರ ಹೇಳಿದೆ. 
ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಶಿವಸೇನೆ, ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. 
ಹಲವು ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಬಿಜೆಪಿ ದೇಶಕ್ಕೆ ಅನ್ಯಾಯವನ್ನು ಮಾಡುತ್ತಿದೆ ಎಂದು ಆರೋಪಿಸಿರುವ ಶಿವಸೇನೆ, ಮುಂದಿನ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದೆ. 
2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಕಿಂಗ್ ಮೇಕರ್ ಆಗಲಿದೆ. ಶಿವಸೇನೆ ಪ್ರಯಾಣ ಸುಲಭವಾಗಿಲ್ಲ. ಇಂದಿಗೂ ನಮ್ಮ ಹಾದಿಯಲ್ಲಿ ಸಾಕಷ್ಟು ಎಡವು ತೊಡಕುಗಳು ಎದುರಾಗುತ್ತಿವೆ. ಎಲ್ಲಾ ಸಮಸ್ಯೆಗಳ ನಡುವೆಯೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆಲವು ಸಾಧಿಸುವ ವಿಶ್ವಾಸವಿದೆ. ಮುಂದಿನ ಚುನಾವಣೆಯಲ್ಲಿ ಶಿವಸೇನೆ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಹೇಳಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com