ಗುವಾಹತಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬುಧವಾರ ಮತ್ತೆ ಆರು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ..ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದಾಗಿ ಅಸ್ಸಾಂ ಆರು ಜಿಲ್ಲೆಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನ ಸಮಸ್ಯೆಗೆ ಸಿಕ್ಕಿಹಾಕಿಕೊಂಡಿದ್ದಾರೆ. .ಗೋಲ್ ಘಾಟ್ ಮತ್ತು ಈಸ್ಟ್ ಮತ್ತು ವೆಸ್ಟ್ ಕಾಂಬ್ರಿಯಲ್ಲಿ ಪ್ರವಾಹ ಕಡಿಮೆಯಾಗಿದೆ. ಆದರೆ ನಾಗೋನ್ ಹೊಜೈ, ಕಚರ್ ಮತ್ತು ಕರೀಂಗಂಜ್ ನಲ್ಲಿ ಪ್ರವಾಹ ಇನ್ನೂ ಮುಂದುವರೆದಿದೆ..ಪ್ರವಾಹದಿಂದಾಗಿ ಸುಮಾರು 727 ಗ್ರಾಮಗಳು ತೊಂದರೆಗೆ ಒಳಗಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos