ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ರಂಜಾನ್ ನಿಮಿತ್ತ ಕದನ ವಿರಾಮ ಘೋಷಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆ ಕೈಗೊಳ್ಳದಂತೆ ನಮಗೆ ಸರ್ಕಾರದಿಂದ ಸೂಚನೆ ಇತ್ತು. ಆದರೆ ಈಗ ರಂಜಾನ್ ಮುಕ್ತಾಯವಾಗಿದ್ದು, ಇನ್ನು ಯಾವುದೇ ಕಾರಣಕ್ಕೂ ಉಗ್ರ ನಿಗ್ರಹ ಕಾರ್ಯಾಚರಣೆ ನಿಲ್ಲುವುದಿಲ್ಲ. ಬದಲಿಗೆ ಮತ್ತಷ್ಟು ಗಂಭೀರವಾಗಿ ಕಾರ್ಯಾಚರಣೆ ನಡೆಸಲಾಗುತ್ತದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.