ಸರ್ಕಾರ ರಚನೆಗೆ ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ರಾಜ್ಯಪಾಲ ಎನ್.ಎನ್. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆ ಶಿಫಾರಸು ಮಾಡಿದ ಪತ್ರವನ್ನು ರಾಷ್ಟ್ರಪತಿ ಕೋವಿಂದ್ ಅವರಿಗೆ ರವಾನಿಸಿದ್ದರು. ಇದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಹೀಗಾಗಿ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಬಂದಿದೆ.