ಇನ್ನು ನಿತೀಶ್ ಕುಮಾರ್ ಅವರು ಈ ಪರಿ ಬಿಜೆಪಿ ವಿರುದ್ಧ ಅಸಮಾಧಾನಗೊಳ್ಳಲು ಕೇಂದ್ರ ಸರ್ಕಾರ ಕಾರಣವಂತೆ. ಈ ಹಿಂದೆ ಸಿಎಂ ನಿತೀಶ್ ಕುಮಾರ್ ಬಿಹಾರಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಳಿದ್ದರು. ಆದರೆ ಈ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇದೇ ಕಾರಣಕ್ಕೆ ನಿತೀಶ್ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಯೋಗ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಜೆಡಿಯು ನಿಂದ ವಿಶೇಷ ಆತಿಥ್ಯ ನಿರೀಕ್ಷೆ ಮಾಡದಂತೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.