ಇತ್ತೀಚೆಗಷ್ಟೇ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಜಮ್ಮು ಕಾಶ್ಮೀರ ಭದ್ರಾತಾ ವಿಚಾರದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದರು. ಅದರಂತೆ ಯುಪಿಎ ಸರ್ಕಾರದ ಅವಧಿಗಿಂತ ಎನ್ ಡಿಎ ಅವಧಿಯಲ್ಲಿ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಾಹಿತಿ ನೀಡಿದ್ದರು. ಈ ಪೈಕಿ ಯುಪಿಎ ಅವಧಿಯಲ್ಲಿ ಅಂದರೆ 2012ರಲ್ಲಿ 72 ಮಂದಿ, 2013ರಲ್ಲಿ 67 ಮಂದಿ ಮತ್ತು 2013ರಲ್ಲಿ 110 ಮಂದಿ ಉಗ್ರರನ್ನು ಕೊಲ್ಲಲಾಗಿತ್ತು. ಆದರೆ ಎನ್ ಡಿಎ ಸರ್ಕಾರ ಅಧಿಕಾರಕ್ಕೇರಿದ ಬಳಿಕ 2015ರಲ್ಲಿ 108, 2016ರಲ್ಲಿ 150 ಮಂದಿ, 2017ರಲ್ಲಿ 217 ಮಂದಿ ಉಗ್ರರನ್ನು ಕೊಲ್ಲಲಾಗಿದೆ. ಇನ್ನು 2018ರ ಮೇ ತಿಂಗಳವರೆಗೂ 75 ಮಂದಿ ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದರು.