ಕೊಲಿಜಿಯಂ ಸದಸ್ಯರಾಗಿದ್ದಾಗ ಸಿಜೆಐಗಳಾಗಿದ್ದ ಟಿ.ಎಸ್.ಠಾಕೂರ್, ಜೆ.ಎಸ್, ಖೇಹರ್ ಮತ್ತು ದೀಪಕ್ ಮಿಶ್ರಾ ಅವರ ಜೊತೆ ನಿಮ್ಮ ಸಂಬಂಧ ಹೇಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ವೈಯಕ್ತಿಗವಾಗಿ ನನಗೆ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಸ್ಥೆಯಲ್ಲಿ ಕೆಲವೊಂದು ವಿಷಯಗಳನ್ನು ನಾನು ಪ್ರಸ್ತಾಪಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಪತ್ರಿಕಾಗೋಷ್ಠಿಯನ್ನು ಕರೆಯಬೇಕಾಗಿ ಬಂದಿತ್ತು ಎಂದು ತಿಳಿಸಿದ್ದಾರೆ.